ಮಹಾರಾಷ್ಟ್ರದಲ್ಲಿ ರಸ್ತೆ ಬದಿಯ ಬಾವಿಗೆ ಬಿದ್ದ ಬಸ್ 25 ಸಾವು 14 ಮಂದಿ ಗಂಭೀರ..!!
ಮಹಾರಾಷ್ಟ್ರದಲ್ಲಿ ರಸ್ತೆ ಬದಿಯ ಬಾವಿಗೆ ಬಿದ್ದ ಬಸ್ 25 ಸಾವು 14 ಮಂದಿ ಗಂಭೀರ..!!
ನಾಸಿಕ್ : ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್, ಆಟೊಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಬಾವಿಗೆ ಬಿದ್ದ ಪರಿಣಾಮ 8 ಮಹಿಳೆಯರೂ ಸೇರಿದಂತೆ 25 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಬಳಿ ನಡೆದಿದೆ.
ಬಸ್ ಮತ್ತು ಆಟೊ ಎರಡೂ ಬಾವಿಗೆ ಬಿದ್ದಿದ್ದು, ಘಟನೆಯಲ್ಲಿ 14 ಜನರಿಗೆ ತೀವ್ರ ಗಾಯಗಳಾಗಿವೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.
ಮೃತಪಟ್ಟವರಲ್ಲಿ ಏಳು ವರ್ಷದ ಬಾಲಕಿಯೂ ಸೇರಿದ್ದಾಳೆ. ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
LATEST NEWS
ಗಂಭೀರ ಆರೋಪದ ಸುಳಿಯಲ್ಲಿ ಸಿಕ್ಕ ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್
ಮಂಗಳೂರು/ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿ*ಕೆ, ಜಾತಿ ನಿಂದನೆ ಹಾಗೂ ಹಣದ ಆಮಿಷ ಒಡ್ಡಿದ ಆರೋಪದಲ್ಲಿ ಜೈಲು ಪಾಲಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಆದ್ರೆ ಜಾಮೀನು ಪಡೆದು ಹೊರಬರುತ್ತಿದ್ದಂತೆ, ಶಾಸಕ ಹೊರಬರುತ್ತಿದ್ದಂತೆ ಅತ್ಯಾಚಾ*ರ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನ ಬಂಧಿಸಿದ್ದಾರೆ.
ಗುತ್ತಿಗೆದಾರನಿಗೆ ಜೀವ* ಬೆದರಿ*ಕೆ ಹಾಕಿದ ಪ್ರಕರಣದಲ್ಲಿ ಮುನಿರತ್ನ ಅಂದರ್ ಆಗುತ್ತಿದ್ದಂತೆ ಹಲವು ಶಾಕಿಂಗ್ ವಿಚಾರಗಳು ಬೆಳಕಿಗೆ ಬಂದಿವೆ. ಅತ್ಯಾಚಾ*ರ, ಎದುರಾಳಿಗಳನ್ನು ಮಟ್ಟ ಹಾಕಲು ಅವರ ಖಾಸಗಿ ವಿಡಿಯೋಗಳ ದುರ್ಬಳಕೆ, ಹನಿಟ್ರ್ಯಾಪ್ನಲ್ಲಿ ಹೆಚ್ಐವಿ ಸೋಂಕಿತರ ಬಳಕೆ ಹೀಗೆ ಅನೇಕ ಆರೋಪಗಳು ಮುನಿರತ್ನ ಮೇಲೆ ಕೇಳಿ ಬಂದಿದೆ. ಅತ್ಯಾಚಾ*ರ ಹಾಗೂ ಬೆದರಿ*ಕೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಮುನಿರತ್ನರನ್ನು ಬಂಧಿಸಿದ್ದಾರೆ.
ಮುನಿರತ್ನ ಮೇಲೆ ಇರುವ ಗಂಭೀರ ಆರೋಪಗಳು :
ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಮುನಿರತ್ನ ಬ್ಲ್ಯಾಕ್ಮೇಲ್ ಮಾಡುತ್ತಿದ್ದುದಲ್ಲದೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು. ಅವರು ಈ ವಿಡಿಯೋಗಳನ್ನು ಇಟ್ಟುಕೊಂಡು ಬೆದರಿ*ಕೆ ಹಾಕುತ್ತಿದ್ದಾರೆ ಅಂತ ಅತ್ಯಾಚಾ*ರದ ಸಂತ್ರ*ಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೇ ಸಂ*ತ್ರಸ್ತೆಯ ವೀಡಿಯೋ ಇಟ್ಟುಕೊಂಡು ಹಲವರ ಹನಿಟ್ರ್ಯಾಪ್ಗೆ ಯತ್ನಿಸಿದ್ದರು ಮಾತ್ರವಲ್ಲದೆ ಹೆಚ್ಐವಿ ಸೋಂಕಿತರನ್ನೂ ಇದಕ್ಕಾಗಿ ಬಳಕೆ ಮಾಡಿದ್ದಾಗಿ ಆರೋಪಿಸಿದ್ದಾರೆ.
ಇದನ್ನೂ ಓದಿ : ಬಸ್ ಚಾಲನೆ ವೇಳೆಯೇ ಚಾಲಕನಿಗೆ ಹೃದಯಘಾತ,; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಜೀವ !
ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಅಟ್ರಾಸಿಟಿ ಕೇಸ್ಗಳ ದುರ್ಬ*ಳಕೆ ಮಾಡುತ್ತಿದ್ದರು ಎಂಬ ಆರೋಪವೂ ಈಗ ಕೇಳಿಬಂದಿದೆ. ಮುನಿರತ್ನ ಅಟ್ರಾಸಿಟಿ ಕೇಸ್ಗಳನ್ನೇ ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದರು. ಹಣ ಕೊಟ್ಟು ಪ್ರಭಾವ ಬಳಸಿ ಅಟ್ರಾಸಿಟಿ ಕೇಸ್ಗಳನ್ನು ದಾಖಲಿಸುತ್ತಿದ್ದರು. ಈ ಹಿಂದೆ ಆರ್ಆರ್ ನಗರದಲ್ಲಿ ಹಲವರ ವಿರುದ್ಧ ಅಟ್ರಾಸಿಟಿ ಕೇಸ್ಗಳು ದಾಖಲಾಗಿದ್ದವು ಎಂದು ಮೂಲಗಳು ತಿಳಿಸಿವೆ.
bangalore
ಬಸ್ ಚಾಲನೆ ವೇಳೆಯೇ ಚಾಲಕನಿಗೆ ಹೃದಯಘಾತ,; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಜೀವ !
ಮಂಗಳೂರು/ಬೆಂಗಳೂರು: ಸರ್ಕಾರಿ ಬಸ್ ಚಾಲಕನಿಗೆ ಬಸ್ ಚಾಲನೆ ವೇಳೆಯೇ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಆ ಸಮಯದಲ್ಲಿ ಪೊಲೀಸರು ತೋರಿದ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಜನರ ಜೀವ ಉಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
BMTC ಬಸ್ ಡ್ರೈವರ್ ವೀರೇಶ್ ಅವರಿಗೆ ಗುರುವಾರ(ಸೆ.19) ಮಧ್ಯಾಹ್ನ ಶಾಂತಿನಗರದ ಡಬಲ್ ರೋಡ್ ಬಳಿ ಬಸ್ ರನ್ನಿಂಗ್ನಲ್ಲಿದ್ದ ವೇಳೆ ಏಕಾಏಕಿ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ವೇಗವಾಗಿ ಓಡುತ್ತಿದ್ದ ಬಸ್ ನಿಧಾನವಾಗ ತೊಡಗಿದ ವೇಳೆ ಅನುಮಾನಗೊಂಡ ಹಲಸೂರು ಟ್ರಾಫಿಕ್ ಪೊಲೀಸ್ ಎಎಸ್ಐ ಆರ್ . ರಘುಕುಮಾರ್ ಬಸ್ ಬಳಿ ಓಡಿ ಬಂದು ನೋಡಿದಾಗ ಎದೆಗೆ ಕೈ ಹಿಡಿದು ಬಸ್ ಚಾಲಕ ಒಂದು ಕಡೆಗೆ ವಾಲಿದ್ದನು.
ಹಾರ್ಟ್ ಅಟ್ಯಾಕ್ ಆಗಿರುವುದನ್ನ ಗಮನಕ್ಕೆ ಬಂದಿದ್ದು, ಟ್ರಾಫಿಕ್ ಎಎಸ್ಐ ತಕ್ಷಣ ಹ್ಯಾಂಡ್ ಬ್ರೇಕ್ ಹಾಕಿ ಚಾಲಕನನ್ನು ಕೆಳಗೆ ಇಳಿಸಿ ಆಂಬುಲೆನ್ಸ್ಗೂ ಕಾಯದೆ, ಅಶೋಕ ನಗರ ಟ್ರಾಫಿಕ್ ಸಿಬ್ಬಂದಿ ಪ್ರಸನ್ನಕುಮಾರ್ ಸಹಾಯದಿಂದ ಬಸ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರು.
ಅದೃಷ್ಟವಶಾತ್, ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಚಾಲಕ ವೀರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಪೊಲೀಸರ ಸಮಯಪ್ರಜ್ಞೆ 45 ಜನರ ಪ್ರಾಣವನ್ನೂ ಉಳಿಸಿದೆ.
BELTHANGADY
ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ
ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.
ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.