ಶಾಸಕ ಖಾದರ್ ತಲೆ ಕಡಿಯುತ್ತೇವೆ ಹೇಳಿಕೆಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಾಸಕ ಖಾದರ್ ತಲೆ ಕಡಿಯುತ್ತೇವೆ ಹೇಳಿಕೆಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು : ಶಾಸಕ ಯು.ಟಿ.ಖಾದರ್ ತಲೆ ಕಡಿಯುತ್ತೇವೆ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.ಕಾವೂರು ಪೋಲೀಸ್ ಠಾಣೆಯಲ್ಲಿ ಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷ ರವೂಫ್ ನೇತೃತ್ವದಲ್ಲಿ ಈ ದೂರು ದಾಖಲಾಗಿದೆ. ಮಂಗಳೂರಿನಲ್ಲಿ ಸಿಎಎ ಪರ ನಡೆದ ಸಭೆಯಲ್ಲಿ ಭಾಗವಹಿಸಿದ ಕೆಲ ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಯು.ಟಿ.ಖಾದರ್ ರವರ ತಲೆ ಕಡಿಯುತ್ತೇವೆಂಬ ಎಂಬ ಹೇಳಿಕಯ ವಿರುದ್ಧ ಕಾವೂರು ಪೋಲೀಸ್ ಠಾಣೆಯಲ್ಲಿ ಮಂಗಳೂರು ಯುವ ಕಾಂಗ್ರೆಸ್ ನಿಂದ ದೂರು ದಾಖಲಿಸಲಾಯಿತು.
ಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷ ರವೂಫ್ ಸಿ ಎಂ,ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಅರುಣ್ ಈಶ್ವರ ಉಳ್ಳಾಲ ಹಾಗೂ ನಾಸಿರ್ ಸಾಮಣಿಗೆ,ಮಂಗಳೂರು ಯುವ ಕಾಂಗ್ರೆಸ್ ಕಾರ್ಯದರ್ಶಿ ಶಮೀರ್ ಪಜೀರ್ ,ಹಾಶೀರ್ ಪೇರಿಮಾರ್,ಗೋಪಾಲ ತಚ್ಚಾನಿ,ಕಿನ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಅನ್ಸಾರ್ ಕಿನ್ಯ,ಜಾಫರ್ ಉಳ್ಳಾಲ,ಹಿಶಾಮ್ ಫರಂಗಿಪೇಟೆ,ಮುರಲೀಧರ್ ಶೆಟ್ಟಿ ನರಿಂಗಾನ,ಯೂಸುಫ್ ಉಚ್ಛಿಲ,ರಿಳ್ವಾನ್ ಫರಂಗಿಪೇಟೆ, ಮುಂತಾದವರು ಉಪಸ್ಥಿತರಿದ್ದರು.
ವಿಡಿಯೋಗಾಗಿ..
BELTHANGADY
ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ
ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.
ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.
ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.
DAKSHINA KANNADA
ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ಮಂಗಳೂರು : ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತರು. ಈ ಪೈಕಿ ಸುಹೈಲ್ ಹಾಗೂ ಝುಬೈರ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್ನ ಸಹಕಾರದಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.